ಬೆಂಗಳೂರು: ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆದ “ಬೆಂಗಳೂರು ಕಂಬಳ ನಮ್ಮ-ಕಂಬಳ’ಕ್ಕೆ ರವಿವಾರ ರಾತ್ರಿ ತೆರೆ ಬಿತ್ತು.
ರಿಷಬ್ ಶೆಟ್ಟಿ ಅಭಿನಯದ “ಕಾಂತಾರ’ ಚಿತ್ರದಲ್ಲಿ ಓಡಿದ್ದ ಕೋಣ ಚಿನ್ನದ ಪದಕ ಪಡೆದುಕೊಂಡಿತು. ಬೊಳಂಬಳ್ಳಿ ಪರಮೇಶ್ವರ್ ಭಟ್ಟ ಅವರ ಅಪ್ಪು ಕುಟ್ಟಿ 6.5 ಕೋಲು ನೀರು ಚಿಮ್ಮಿಸಿ ಕೆನೆಹಲಗೆ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಪಡೆದಿದೆ.
ಕಂಬಳವನ್ನು ರಜಾದಿನಗಳಲ್ಲಿ ಹಮ್ಮಿಕೊಂಡ ಕಾರಣ 8 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿ ಸಂಭ್ರಮಿಸಿದರು. ಕೊನೆಯ ದಿನದ ಕಂಬಳದಲ್ಲಿ ಎಲ್ಲಿ ನೋಡಿದರೂ ಜನರ ದಂಡು, ನೂಕು ನುಗ್ಗಲು, ಜಾತ್ರೆಯ ವಾತಾವರಣ ವಿಶೇಷವಾಗಿತ್ತು.
ಕಂಬಳದಲ್ಲಿ ಕೋಣಗಳು ಓಡುವುದು ಎಷ್ಟು ಮುಖ್ಯವೋ ವೀಕ್ಷಕ ವಿವರಣೆ ಕೂಡ ಅಷ್ಟೇ ಮುಖ್ಯ. ಈ ಬಾರಿ ಬೆಂಗಳೂರು ಕಂಬಳಕ್ಕೆ ಕರಾವಳಿಯಿಂದ 30 ಮಂದಿ ವೀಕ್ಷಕ ವಿವರಣೆಗಾರರ ತಂಡ ಕೆಲಸ ಮಾಡಿತ್ತು. ಇವರು ಪ್ರತಿ ನಾಲ್ಕು ಗಂಟೆಯ ಪಾಳಿಯಲ್ಲಿ ದುಡಿದಿದ್ದರು.
ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಎರಡು ದಿನಗಳಿಂದ ಯಕ್ಷಗಾನ, ಆಟಿ ಕಳಂಜ, ಹುಲಿ ವೇಷ, ಕಂಗೀಲು ನೃತ್ಯ, ಮಂಕಾಳಿ ನಲಿಕೆ, ಬಾಲಿವುಡ್ ಸಮಕಾಲೀನ ನೃತ್ಯ, ಕಂಬಳದ ಪದ ನಲಿಕೆ, ಚೆನ್ನು ನಲಿಕೆ ಮುಂತಾದವು ಮನರಂಜನೆ ನೀಡಿತು. ಆಕ್ಸಿಜನ್ ಡ್ಯಾನ್ಸ್ ತಂಡ ನಡೆಸಿಕೊಟ್ಟ ನೃತ್ಯಕ್ಕೆ ಪ್ರೇಕ್ಷಕರು ಮಾರು ಹೋದರು. ಪ್ರಶಂಸಾ ಮಂಗಳೂರು ಹಾಗೂ ಕಾಮಿಡಿ ಕಿಲಾಡಿ ತಂಡದವರಿಂದ ಕಾಮಿಡಿ ಶೋ ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿಯರಾದ ಇಂದು ನಾಗರಾಜ್, ಶಮಿತಾ ಮಲಾ°ಡ್ ಹಾಗೂ ಗುರುಕಿರಣ್ ನಡೆಸಿಕೊಟ್ಟ ಸಂಗೀತ ಸಂಜೆ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಮಂದಿ ಮುಗಿಬಿದ್ದರು.
ವೀಕ್ಷಕರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಗೋಲ್ಡ್ ಫಿಂಚ್ ಸಂಸ್ಥೆಯು ಕಂಬಳಕ್ಕೆ ಬರುವ ಎಲ್ಲರಿಗೂ ಉಚಿತವಾಗಿ ಕೊಟ್ಟಿರುವ ಗಿಫ್ಟ್ ಕೂಪನ್ ಪಡೆಯುವಲ್ಲಿ ಭಾರೀ ಜನಸಂದಣಿ ಉಂಟಾಯಿತು. ಕಂಬಳ ನಡೆಯುವ ಜಾಗದಲ್ಲಿ 3 ಕಡೆಗಳಲ್ಲಿ ಇರಿಸಲಾಗಿರುವ ಬಾಕ್ಸ್ಗಳಲ್ಲಿ ಕೂಪನ್ ಸ್ಲಿಪ್ ಹಾಗೂ ಮೊಬೈಲ್ ನಂಬರ್ ಬರೆದು ಹಾಕಿದರು. ವಿಜೇತರು 1 ಕಾರು, 1 ಬುಲೆಟ್ ಬೈಕ್, 1 ಎಲೆಕ್ಟ್ರಿಕ್ ಬೈಕ್ ಅನ್ನು ಬಹುಮಾನ ಪಡೆಯಲಿದ್ದಾರೆ.
ಕಂಬಳ ಮುಗಿಸಿ ಕರಾವಳಿಯತ್ತ ಹೊರಟ ಕೋಣಗಳನ್ನು ಬೆಂಗಳೂರಿಗರು ಭಾರವಾದ ಮನಸ್ಸಿನಿಂದ ಬೀಳ್ಕೊಟ್ಟರು. ಈ ವೇಳೆ ಅನೇಕರು ಕೋಣಗಳಿಗೆ ಮತ್ತೊಮ್ಮೆ ಬೆಂಗಳೂರಿಗೆ ಬರುವಂತೆ ಆಹ್ವಾನಿಸಿದರು. ಕೋಣಗಳು ಲಾರಿಗಳನ್ನು ಏರುವಾಗ ಸಮಿತಿಯ ಕಾರ್ಯಕರ್ತರ ಕಣ್ಣಲ್ಲಿ ಹನಿ ನೀರು ಜಾರಿದವು.
ರವಿವಾರ ರಜಾ ದಿನವಾಗಿದ್ದರಿಂದ ಬೆಂಗಳೂರು ಸಹಿತ ರಾಜ್ಯದ ವಿವಿಧ ಮೂಲೆಗಳಿಂದ ಕುಟುಂಬ ಸಮೇತರಾಗಿ ಲಕ್ಷಾಂತರ ಜನ ಭೇಟಿ ಕೊಟ್ಟರು. ಕಂಬಳದ ಕರೆಗಳ ಸುತ್ತಲೂ ಸಾವಿರಾರು ಮಂದಿ ನೆರೆದಿದ್ದರಿಂದ ಪ್ರತಿಯೊಬ್ಬರಿಗೂ ಕೋಣಗಳ ಓಟ ನೋಡಲು ಪರದಾಡಬೇಕಾಯಿತು. ಆಯೋಜಕರು ಪ್ರಮುಖ ಕಡೆಗಳಲ್ಲಿ ಅಳವಡಿಸಿದ್ದ ಬೃಹತ್ ಗಾತ್ರದ 6ಕ್ಕೂ ಹೆಚ್ಚಿನ ಎಲ್ಇಡಿ ಸ್ಕ್ರೀನ್ಗಳಲ್ಲೇ ಕಂಬಳ ಕಂಡು ಪುಳಕಿತರಾದರು. ರವಿವಾರ ರಾತ್ರಿ ಕಂಬಳವು ಫೈನಲ್ ಸುತ್ತಿಗೆ ಬಂದಾಗ ಇದರ ರೋಚಕತೆ ಇನ್ನಷ್ಟು ಹೆಚ್ಚಿತು. ಗೆಲ್ಲುವ ಕೋಣಗಳ ಮೇಲೆ ಎಲ್ಲರ ಚಿತ್ತ ಬಿದ್ದಿತ್ತು. ಕೊನೆಯ ಕ್ಷಣದಲ್ಲಿ ಆಯೋಜಕರು, ಕಂಬಳ ತಜ್ಞರು, ಕೋಣಗಳ ಮಾಲಕರು, ಪರಿಚಾರಕರಲ್ಲಿ ಭಾರೀ ಕುತೂಹಲ ಕೆರಳಿಸಿತು. ರಾತ್ರಿ ಅರಮನೆ ಮೈದಾನವು ವಿದ್ಯುತ್ ದೀಪಗಳಿಂದ ಕಂಗೊಳಿಸಿದರೆ, ವಾದ್ಯಮೇಳದವರು ಇಂಪಾದ ವಾದ್ಯನುಡಿಸಿ ನೆರೆದಿದ್ದವರನ್ನು ಸೆಳೆದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…