ಹೊಸದಿಲ್ಲಿ: ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೇಂದ್ರದ ನಿರ್ಣಯವನ್ನು ಸುಪ್ರೀಂ ಎತ್ತಿ ಹಿಡಿದಿದೆ.ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದಿನ ತೀರ್ಪು ಕೇವಲ ಕಾನೂನು ತೀರ್ಪಲ್ಲ; ಇದು ಭರವಸೆಯ ದಾರಿದೀಪ, ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ, ಹೆಚ್ಚು ಅಖಂಡ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. 2019ರ ಆಗಸ್ಟ್ 5ರಂದು ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿದಿದೆ; ಇದು ಜಮ್ಮು, ಕಾಶ್ಮೀರ ಮತ್ತು ಲಡಾಖ್ ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆಯ ಪ್ರತಿಧ್ವನಿಸುವ ಘೋಷಣೆಯಾಗಿದೆ. ನ್ಯಾಯಾಲಯವು ತನ್ನ ಆಳವಾದ ಬುದ್ಧಿವಂತಿಕೆಯಲ್ಲಿ, ಭಾರತೀಯರಾದ ನಾವು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸುವ ಏಕತೆಯ ಸಾರವನ್ನು ಬಲಪಡಿಸಿದೆ ಎಂದಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…