ಪುತ್ತೂರು

ವಿಧಾನಸಭೆಯಲ್ಲಿ ಹೊಸ ಪಡಿತರ ಕಾರ್ಡು ಮತ್ತು ತಿದ್ದುಪಡಿಗೆ ಅವಕಾಶ ಕೊಡಲು ಸರಕಾರವನ್ನು ಆಗ್ರಹಿಸಿದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು:ದ ಕ ಜಿಲ್ಲೆಯಲ್ಲಿ 5500 ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ ಕಲ್ಪಿಸಿದರೂ ಸರ್ವರ್ ಬ್ಯುಸಿ ಇರುವ ಕಾರಣ ಯಾವುದೇ ತಿದ್ದುಪಡಿಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ, ಪುತ್ತೂರು ತಾಲೂಕಿನಲ್ಲಿ ಮೂರು ತಿಂಗಳಲ್ಲಿ ಕೇವಲ ಏಳು ಜನರಿಗೆ ಮಾತ್ರ ತಿದ್ದುಪಡಿ ಮಾಡಲು ಸಾಧ್ಯವಾಗಿದೆ ತಿಂಗಳಲ್ಲಿ ಹತ್ತು ದಿನ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಬೇಕು ಮತ್ತು ಸರ್ವರ್ ಬ್ಯುಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರ‍್ಯಯವರು ಸರಕಾರವನ್ನು ಆಗ್ರಹಿಸಿದ್ದಾರೆ.

Advertisement
Advertisement
Advertisement

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅದಿವೇಶನದಲ್ಲಿ ಮಾತನಾಡಿದ ಶಾಸಕರಾದ ಅಶೋಕ್ ರೈಯವರು ಸರಕಾರದ ಯೋಜನೆಯನ್ನು ಪಡೆದುಕೊಳ್ಳಲು ರೇಶನ್ ಕಾರ್ಡು ಇಲ್ಲದೆ ಸಾಧ್ಯವಾಗುತ್ತಿಲ್ಲ. ಹೆಚ್ಚಾಗಿ ಬಡವರೇ ತೊಂದರೆಗೊಳಗಾಗಿದ್ದು ರೇಶನ್ ಕಾರ್ಡು ತಿದ್ದುಪಡಿ ಅಥವಾ ಹೊಸ ರೇಶನ್ ಕಾರ್ಡು ಪಡೆಯಲು ಸೈಬರ್ ಗಳಿಗೆ ಅಲೆದಾಡುವಂತಾಗಿದೆ. ಸರ್ವರ್ ಬ್ಯುಸಿಯಿಂದಾಗಿ ಈ ಸಮಸ್ಯೆ ಉಂಟಾಗಿದ್ದು ಶೀಘ್ರವೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಒಟ್ಟು ೨೫ ಸಾವಿರ ಮಂದಿ ಪಡಿತರ ಕಾರ್ಡು ತಿದ್ದುಪಡಿ ಮಾಡಲು ಅರ್ಜಿ ಹಿಡಿದು ಕಾಯುತ್ತಿದ್ದಾರೆ. ಪ್ರತೀ ದಿನ ಸೈಬರ್‌ಗೆ ತೆರಳುತ್ತಿದ್ದಾರೆ. ಆದರೆ ಸರ್ವರ್ ಬ್ಯುಸಿ ಇರುವ ಕಾರಣ ತಿದ್ದುಪಡಿ ಮಾಡಲು ಸಾಧ್ಯವಾಗುತ್ತಿಲ್ಲ. ಸರಕಾರ ತಕ್ಷಣ ಏನು ಸರ್ವರ್ ಸಮಸ್ಯೆ ಇದೆಯೋ ಅದನ್ನು ಬಗೆಹರಿಸಿ ಜನತೆಗೆ ನರವಾಗಬೇಕು ಎಂದು ಆಗ್ರಹಿಸಿದರು.

ಈಗಾಗಲೇ ರಾಜ್ಯ ಸರಕಾರ ೫ ಕೆ ಜಿ ಅಕ್ಕಿಯ ಬದಲಾಗಿ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ಮುಂದೆ ಅಕ್ಕಿ ನೀಡುವಾಗ ಕರಾವಳಿ ಭಾಗಕ್ಕೆ ಕುಚ್ಚಲಕ್ಕಿಯನ್ನೇ ಕೊಡಬೇಕು ಎಂದು ಶಾಸಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಕರಾವಳಿ ಭಾಗಕ್ಕೆ ಕುಚ್ಚಲಕ್ಕಿ ಕೊಡಬೇಕು ಎಂಬ ಬೇಡಿಕೆಯನ್ನು ಮಾನ್ಯ ಮಾಡುತ್ತೇನೆ. ಕುಚ್ಚಲಕ್ಕಿ ಕೊಡಲು ಶಕ್ತಿ ಮೀರಿ ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ರೈ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪರವರು ಶಾಸಕರು ತಿಳಿಸಿರುವ ಸಮಸ್ಯೆ ಬಗ್ಗೆ ಅರಿವಿದೆ. ಸರ್ವರ್ ಬ್ಯುಸಿ ಗಂಭೀರ ಸಮಸ್ಯೆಯಾಗಿದೆ. ಇಲಾಖೆಯ ಸರ್ವರ್‌ಗಳು ಎಲ್ಲಾ ವಿಭಾಗಕ್ಕೂ ಬಳಕೆಯಾಗುತ್ತಿರುವ ಕಾರಣ ಈಗ ಇರುವ ಇಲಾಖೆಯ ಸರ್ವರ್‌ಗಳು ಹಳೆಯದಾಗಿರುವ ಕಾರಣ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣಕ್ಕೆ ಹೊಸದಾಗಿ ಎನ್‌ಐಸಿಯಿಂದ ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್‌ಗೆ ಮೈಗ್ರೇಶನ್ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ತಂತ್ರಜ್ಞಾನದ ಸರ್ವರ್ ಬಳಕೆ ಪ್ರಕ್ರಿಯೆ ನಡೆಯುತ್ತಿದ್ದು ಅತಿ ಶೀಘ್ರವೇ ಈ ಸಮಸ್ಯೆ ಬಗೆಹರಿಯಲಿದೆ. ಆ ಬಳಿಕ ಹೊಸ ಪಡಿತರ ಮತ್ತು ಪಡಿತರ ಕಾರ್ಡು ತಿದ್ದುಪಡಿ ಸಮಸ್ಯೆ ಇಡೀ ರಾಜ್ಯದಲ್ಲಿ ಇತ್ಯರ್ಥವಾಗಲಿದೆ ಎಂದು ಸಚಿವರು ಉತ್ತರಿಸಿದರು.

ಎನ್‌ಐಸಿಯಿಂದ ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್‌ಗೆ ಮೈಗ್ರೇಶನ್ ಪೂರ್ಣಗೊಂಡ ಬಳಿಕ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಾಗುತ್ತದೆ.ಹೊಸ ತಂತ್ರಜ್ಞಾನದ ಸರ್ವರ್‌ಗಳು ಮುಂದಿನ ದಿನಗಳಲ್ಲಿ ಚಾಲ್ತಿಗೆ ಬರಲಿದ್ದು ಆ ಬಳಿಕ ರಾಜ್ಯಾದ್ಯಂತ ಪಡಿತರ ಅರ್ಜಿ ಮತ್ತು ತಿದ್ದುಪಡಿ ಪ್ರಕ್ರಿಯೆಗಳು ಯಾವುದೇ ತೊಂದರೆಯಿಲ್ಲದೆ ಕಾರ್ಯ ನಿರ್ವಹಿಸಲಿದೆ ಎಂದು ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago