ಇತರೆ

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! – ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

Advertisement
Advertisement
Advertisement

ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು. ಅದಕ್ಕಾಗಿ ಅನೇಕ ಸ್ಥಳಗಳಿಂದ ಹಿಂದುತ್ವನಿಷ್ಟ ಸಂಘಟನೆಗಳು ಒಟ್ಟು ಸೇರಿ ಆಂದೋಲನವನ್ನೂ ನಡೆಸಿದರು. ಇದಕ್ಕೆ ತತ್ಪರತೆಯಿಂದ ಉತ್ತರಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಸನ್ಮಾನ್ಯ ಯೋಗಿ ಆದಿತ್ಯನಾಥ ಇವರು ಅಯೋಧ್ಯೆಯ 84 ಮೈಲಿ ದೂರದ ಪ್ರದಕ್ಷಿಣೆ ಯಾತ್ರೆಯ ಕ್ಷೇತ್ರದಲ್ಲಿ ಮದ್ಯವನ್ನು ನಿಷೇಧಿಸಿದ್ದಾರೆ. ಈ ಶ್ಲಾಘನೀಯ ನಿರ್ಣಯವನ್ನು ಹಿಂದೂ ಜನಜಾಗೃತಿ ಸಮಿತಿ ಸ್ವಾಗತಿಸುತ್ತದೆ ಮತ್ತು ಉತ್ತರಪ್ರದೇಶ ಸರಕಾರಕ್ಕೆ ಆಭಾರ ವ್ಯಕ್ತಪಡಿಸುತ್ತದೆ.

ಇದೇ ರೀತಿ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಪಾವಿತ್ರ‍್ಯ ಕಾಪಾಡಲು ಕಾಶಿ, ಮಥುರಾ ಮತ್ತು ಇತರೆ ಎಲ್ಲಾ ತೀರ್ಥಕ್ಷೇತ್ರಗಳ ಪರಿಸರದಲ್ಲಿ ಮದ್ಯಮಾಂಸದ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಸನ್ಮಾನ್ಯ ಯೋಗಿಜಿಯವರಲ್ಲಿ ಮನವಿ ಸಲ್ಲಿಸಲಾಗಿದೆ.

ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ತೀರ್ಥಕ್ಷೇತ್ರಗಳು ಮುಂತಾದ ಸ್ಥಳಗಳಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಈ ಸ್ಥಳಗಳಲ್ಲಿ ‘ಪ್ರವಾಸೋದ್ಯಮ’ದ ಹೆಸರಿನಲ್ಲಿ ಬಿಯರ್ ಬಾರ್, ಡಾನ್ಸ್ ಬಾರ್, ಲಿಕರ್ ಶಾಪ್, ಚೈನೀಸ್ ಆಹಾರ ಪದಾರ್ಥದ ಅಂಗಡಿ, ಮಸಾಜ್ ಸೆಂಟರ್, ಮಟನ್ ಶಾಪ್ ಬೃಹತ್ ಪ್ರಮಾಣದಲ್ಲಿ ತೆರೆಯಲಾಗುತ್ತದೆ. ಪ್ರತ್ಯಕ್ಷದಲ್ಲಿ ಭಕ್ತರು ದೇವರ ದರ್ಶನ, ತೀರ್ಥಯಾತ್ರೆ, ಸಾಧನೆಗಾಗಿ ಇಂತಹ ಸ್ಥಳಗಳಿಗೆ ಬರುತ್ತಾರೆ. ಮದ್ಯ-ಮಾಂಸ ಅಥವಾ ಮೋಜು-ಮಸ್ತಿ ಮಾಡುವುದಕ್ಕಲ್ಲ. ಆದ್ದರಿಂದ ಭಕ್ತರಿಗಾಗಿ ಸುವಿಧಗಳನ್ನಂತೂ ಮಾಡಬೇಕು; ಆದರೆ ಅದರ ಜೊತೆಗೆ ಇಂತಹ ಪವಿತ್ರ ಸ್ಥಾನದ ಪಾವಿತ್ರ‍್ಯತೆಯನ್ನೂ ರಕ್ಷಿಸಬೇಕು. ಕೆಲವು ತೀರ್ಥಕ್ಷೇತ್ರಕ್ಕೆ ಹೋದಾಗ ಅಲ್ಲಿಯ ಪಾವಿತ್ರ್ಯ ರಕ್ಷಿಸದಿರದ ಕಾರಣ ನಿಜವಾಗಿಯೂ ನಾವು ತೀರ್ಥಕ್ಷೇತ್ರಗಳಿಗೆ ಬಂದಿದ್ದೇವಾ ? ಎಂದು ಸಂದೇಹ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಹಿಂದೆ ಹರಿದ್ವಾರ ಮತ್ತು ಋಷಿಕೇಶ ಇಲ್ಲಿಯೂ ಸ್ಥಳೀಯ ಆಡಳಿತದಿಂದ ಮದ್ಯ ಮಾಂಸದ ಮೇಲೆ ನೂರರಷ್ಟು ನಿಷೇಧ ಹೇರಿತ್ತು.

ಹರಿದ್ವಾರ ಮತ್ತು ಋಷಿಕೇಶ ಈ ತೀರ್ಥಕ್ಷೇತ್ರಗಳಲ್ಲಿ ಕುಂಭಮೇಳ ನಡೆಯುತ್ತದೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಅಲ್ಲಿ ಧಾರ್ಮಿಕ ಉಪಾಸನೆ ಮಾಡಲು ಬರುತ್ತಾರೆ. ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆ ತೀರ್ಥಕ್ಷೇತ್ರದ ಜೊತೆಗೆ ಜೋಡಣೆಯಾಗಿರುತ್ತದೆ. ಇದನ್ನು ಪ್ರಾಧಾನ್ಯವಾಗಿ ವಿಚಾರ ಮಾಡಿ ಈ ನಿಷೇಧವನ್ನು ಮಾನ್ಯ ಸರ್ವೋಚ್ಚ ನ್ಯಾಯಾಲಯವು ಖಾಯಂಗೊಳಿಸಿತು. ಇದೇ ಭೂಮಿಕೆಯಲ್ಲಿ ಎಲ್ಲಾ ತೀರ್ಥಕ್ಷೇತ್ರ ಸ್ಥಳಗಳಲ್ಲಿ ಮದ್ಯ ಮಾಂಸದ ಮೇಲೆ 100ರಷ್ಟು ನಿಷೇಧ ಹೇರಬೇಕೆಂದು ಸಮಿತಿ ಆಗ್ರಹಿಸಿದೆ.

ತಮ್ಮ ಸವಿನಯ, ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ, (ಸಂಪರ್ಕ : 7204082609)

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago

ಛತ್ತಿಸ್ಗಢ ರಾಜ್ಯದಲ್ಲೂ ಹಲಾಲ್ ಉತ್ಪಾದನೆ ನಿಷೇಧದ ಬೇಡಿಕೆ !

ಛತ್ತೀಸ್ಗಡ ರಾಜ್ಯದಲ್ಲೂ ಹಲಾಲ್ ಉತ್ಪಾದನೆಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುವರು !- ವಿಜಯ ಶರ್ಮಾ, ಉಪಮುಖ್ಯಮಂತ್ರಿ, ಛತ್ತೀಸ್ಗಢ ರಾಜ್ಯ ರಾಯಪುರ…

1 year ago