ಇತರೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪ ರಂದು ಸಂಜೆ ೪ ಗಂಟೆಗೆ ಹೆಜಮಾಡಿ ಬಿಲ್ಲವರ ಸಂಘ (ರಿ.) ಹೆಜಮಾಡಿ ಜಯ ಸಿ. ಸುವರ್ಣ ಸಭಾಗೃಹದಲ್ಲಿ ಜರುಗಿತು.

Advertisement
Advertisement
Advertisement

ಈ ಸಭೆಗೆ ಮಟ್ಟು ಮೊಗವೀರ ಮಹಾಸಭೆಯ ಅಧ್ಯಕ್ಷರಾದ ಶ್ರೀ. ರಘುವೀರ ಎಲ್. ಸುವರ್ಣ, ವಿದ್ಯಾದಾಯಿನಿ ಯುವಕ ಯುವತಿ ವೃಂದದ ಅಧ್ಯಕ್ಷರಾದ ಶ್ರೀ. ಭರತೇಶ್ ಡಿ.ಹೆಜಮಾಡಿ, ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕದ ಸಮನ್ವಯಕರಾದ ಶ್ರೀ. ಚಂದ್ರ ಮೊಗೇರ, ಮತ್ತು ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ ಚಂದ್ರ ಮೊಗೇರ ಇವರು ಮಾತನಾಡುತ್ತಾ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನರಾಗುತ್ತಿದ್ದಾರೆ. ಈ ಪವಿತ್ರ ಭೂಮಿಯು ಪ್ರಭು ಶ್ರೀರಾಮರ ‘ರಾಮರಾಜ್ಯ’ವನ್ನು ನೋಡಿತು,ಪಾಂಡವರ ‘ಧರ್ಮರಾಜ್ಯ’ವನ್ನು ನೋಡಿತು, ಚಂದ್ರಗುಪ್ತ ಮೌರ್ಯನ ವಿಶಾಲವಾದ ‘ಮೌರ್ಯಶಾಸನ’ವನ್ನು ನೋಡಿತು, ರಾಜಾಕೃಷ್ಣದೇವರಾಯರ ‘ವಿಜಯನಗರ ಸಾಮ್ರಾಜ್ಯ’ವನ್ನು ನೋಡಿತು, ಅದೇ ರೀತಿ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ‘ಹಿಂದವೀ ಸ್ವರಾಜ್ಯ’ವನ್ನು ಅನುಭವಿಸಿದೆ. ಇಂದು ಅದೇ ಭೂಮಿಯಲ್ಲಿ ಪುನಃ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರದ ಧ್ವನಿಯನ್ನು ಮೊಳಗಿಸಲು ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ಈಗ ಹಿಂದೂಗಳಿಗೆ ಒಂದೇ ಮಿಶನ್ ಹಿಂದೂ ರಾಷ್ಟ್ರದ ಸ್ಥಾಪನೆ ಎಂದು ಘೋಷಿಸಿದರು.

ಸನಾತನ ಸಂಸ್ಥೆಯ ವಕ್ತಾರರಾದ ಸೌ. ಲಕ್ಷ್ಮೀ ಪೈ ಇವರು ಮಾತನಾಡುತ್ತಾ ಹಿಂದೂ ರಾಷ್ಟ್ರದ ಅವಶ್ಯಕತೆ, ಸನಾತನ ಹಿಂದೂ ಧರ್ಮದ ಮಹಾನತೆ ಧರ್ಮ ಶಿಕ್ಷಣದ ಅವಶ್ಯಕತೆ , ಸರ್ವಧರ್ಮ ಸಮಭಾವದ ಹೆಸರಿನಲ್ಲಿ ಹಿಂದುಗಳಿಗೆ ಆಗುವ ಅನ್ಯಾಯ, ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯವನ್ನು ಮಾಡಲು ಮಾನಸಿಕ, ಭೌತಿಕ, ಶಾರೀರಿಕ ಸ್ಥರದಲ್ಲಿ ಮಾಡುವುದಕ್ಕಿಂತ, ಆಧ್ಯಾತ್ಮಿಕ ಬಲ, ಭಗವಂತನ ಉಪಾಸನೆ, ಸಾಧನೆಯ ಅಧಿಷ್ಠಾನ ಅತೀ ಮುಖ್ಯವಾಗಿದೆ ಎಂದು ಮಂಡಿಸಿದರು. ಧರ್ಮಾಚರಣೆಯ ಕೃತಿಗಳನ್ನು ಮಾಡುವುದರಿಂದ ಯಾವ ರೀತಿ ಧರ್ಮ ರಕ್ಷಣೆಯಾಗುವುದು,ಕುಂಕುಮದಾರಣೆಯ ಮಹತ್ವ , ಶೇಕ್ ಹ್ಯಾಂಡ್ ಮಾಡುವ ಬದಲು ನಮಸ್ಕಾರ ಕೃತಿಯನ್ನು ಮಾಡುವ ಪದ್ಧತಿ, ದೇವಸ್ಥಾನ ಪ್ರವೇಶ ಮಾಡುವಾಗ ವಸ್ತ್ರ ಸಂಹಿತೆ ನಿಯಮದ ಪಾಲನೆ, ಭಗವಂತನ ಉಪಾಸನೆಯಿಂದ ಹೇಗೆ ನಾವು ಚೈತನ್ಯ, ಜ್ಞಾನ, ಹಾಗೂ ನೈತಿಕ ಸಂವರ್ಧನೆಯನ್ನು ಪಡೆಯಬಹುದು ಎಂದು ಮಾಹಿತಿಯನ್ನು ನೀಡಿದರು.

ಶ್ರೀ ವಿಜಯಕುಮಾರ್ ಸಮನ್ವಯಕರು,ಹಿಂದೂ ಜನಜಾಗೃತಿ ಸಮಿತಿ.

ommnews

Recent Posts

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago

ಛತ್ತಿಸ್ಗಢ ರಾಜ್ಯದಲ್ಲೂ ಹಲಾಲ್ ಉತ್ಪಾದನೆ ನಿಷೇಧದ ಬೇಡಿಕೆ !

ಛತ್ತೀಸ್ಗಡ ರಾಜ್ಯದಲ್ಲೂ ಹಲಾಲ್ ಉತ್ಪಾದನೆಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುವರು !- ವಿಜಯ ಶರ್ಮಾ, ಉಪಮುಖ್ಯಮಂತ್ರಿ, ಛತ್ತೀಸ್ಗಢ ರಾಜ್ಯ ರಾಯಪುರ…

1 year ago