Categories: ಇತರೆ

ಕಿಡ್ನಿಗೆ ಯಾವುದೇ ಸಮಸ್ಯೆ ಬರಬಾರದು ಅಂದ್ರೆ ನಿಮ್ಮ ಅಡುಗೆಯಲ್ಲಿ ಈ ಎಣ್ಣೆಯನ್ನು ತಪ್ಪದೇ ಬಳಸಿ…

ಆರೋಗ್ಯಕರ ದೇಹ ಹೊಂದಲು ಪೌಷ್ಟಿಕ ಆಹಾರ ಸೇವನೆ ಅತ್ಯಗತ್ಯ. ಇದರೊಂದಿಗೆ ನಿಯಮಿತ ವ್ಯಾಯಾಮ ಮತ್ತು ಸಾಕಷ್ಟು ನಿದ್ರೆಯು ಮುಖ್ಯ. ನಮ್ಮ ದೇಹದಲ್ಲಿ ಕೆಲವು ಅಂಗಗಳಿವೆ. ನಮ್ಮನ್ನು ಜೀವಂತವಾಗಿ ಮತ್ತು ಆರೋಗ್ಯವಾಗಿಡುವಲ್ಲಿ ಆ ಆ ಅಂಗಗಳು ಪ್ರಮುಖ ಪಾತ್ರ ವಹಿಸುತ್ತಪವೆ. ಅವುಗಳಲ್ಲಿ ಮೂತ್ರಪಿಂಡ ಅಥವಾ ಕಿಡ್ನಿಯು ಒಂದು. ಕಿಡ್ನಿಯು ನಮ್ಮ ದೇಹದ ಪ್ರಮುಖ ಭಾಗವಾಗಿದೆ. ಕಿಡ್ನಿ ಆರೋಗ್ಯವಾಗಿ ಇಲ್ಲದಿದ್ದರೆ ದೇಹದಲ್ಲಿ ಹಲವಾರು ರೋಗಗಳು ಬರಬಹುದು. ಹೀಗಾಗಿ ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.ಮೂತ್ರಪಿಂಡದ ಕೆಲಸವು ದೇಹದಿಂದ ಎಲ್ಲಾ ತ್ಯಾಜ್ಯವನ್ನು ಮೂತ್ರದ ಮೂಲಕ ತೆಗೆದುಹಾಕುವುದು. ಅದಕ್ಕಾಗಿಯೇ ಕಿಡ್ನಿಯ ಕೆಲಸವು ಸರಿಯಾಗಿರಬೇಕು. ಒಂದು ವೇಳೆ ಕಿಡ್ನಿ ಕಾರ್ಯದಲ್ಲಿ ವ್ಯತ್ಯಾಸವಾದರೆ, ದೇಹದ ಸಮತೋಲನವೇ ತಪ್ಪುತ್ತದೆ. ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಯಸಿದರೆ, ನಿಯಮಿತ ಜೀವನಶೈಲಿ ಮತ್ತು ಆರೋಗ್ಯಕರ ಆಹಾರವನ್ನು ಅನುಸರಿಸುವುದು ಬಹಳ ಮುಖ್ಯ. ಅದರಲ್ಲೂ ದಿನನಿತ್ಯದ ಅಡುಗೆಗೆ ಬಳಸುವ ಎಣ್ಣೆಯ ಬಗ್ಗೆ ತುಂಬಾ ಜಾಗರೂಕರಾಗಿರಿ.

Advertisement
Advertisement
Advertisement

ಯಾವ ಎಣ್ಣೆ ಬಳಸಿದರೆ ಒಳ್ಳೆಯದು? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಅದಕ್ಕೆ ಉತ್ತರ ಇಲ್ಲಿದೆ. ಆಲಿವ್ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಆರೋಗ್ಯವನ್ನು ಸುಧಾರಿಸಬಹುದು. ಆಲಿವ್ ಎಣ್ಣೆ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಪರ್ಯಾಪ್ತ ಕೊಬ್ಬುಗಳು ಮತ್ತು ವಿಟಮಿನ್-ಇ ನಂತಹ ಪೋಷಕಾಂಶಗಳು ಆಲಿವ್ ಎಣ್ಣೆಯಲ್ಲಿ ಸಮೃದ್ಧವಾಗಿವೆ. ಇವು ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ, ಆಲಿವ್ ಎಣ್ಣೆಯಲ್ಲಿ ಒಲೀಕ್ ಆಮ್ಲ ಹೇರಳವಾಗಿದೆ. ಇದು ಕಿಡ್ನಿಯಲ್ಲಿನ ಯಾವುದೇ ರೀತಿಯ ಉರಿಯೂತವನ್ನು ಕಡಿಮೆ ಮಾಡುತ್ತದೆ. ಈ ಕಾರಣಕ್ಕಾಗಿ, ಆಲಿವ್ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದು ತುಂಬಾ ಒಳ್ಳೆಯದು.

ಕಿಡ್ನಿ ಆರೋಗ್ಯಕ್ಕಾಗಿ ಈ ಆಹಾರಗಳನ್ನು ಸೇವಿಸಿ

  1. ನಿಮ್ಮ ಕಿಡ್ನಿಯನ್ನು ದೀರ್ಘಕಾಲ ಆರೋಗ್ಯವಾಗಿ ಇಟ್ಟುಕೊಳ್ಳಲು ನೀವು ಬಯಸಿದರೆ, ನಿಮ್ಮ ಆಹಾರದಲ್ಲಿ ಸಾಕಷ್ಟು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಸೇವಿಸಿ. ಇವುಗಳನ್ನು ಉತ್ತಮ ಪ್ರಮಾಣದಲ್ಲಿ ಸೇವಿಸುವುದರಿಂದ ಕಿಡ್ನಿಗಳು ಸಂಪೂರ್ಣ ಫಿಟ್ ಆಗಿರುತ್ತದೆ. ವಾಸ್ತವವಾಗಿ ಈ ಎರಡೂ ಉರಿಯೂತ ಶಮನ ಮಾಡುವ ಗುಣಗಳನ್ನು ಹೊಂದಿವೆ. ವಿಟಮಿನ್ ಬಿ6, ಮ್ಯಾಂಗನೀಸ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ.
  2. ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಮ್ಮ ಆಹಾರದಲ್ಲಿ ಕ್ರೂಸಿಫೆರಸ್ ಕುಟುಂಬದ ಕೆಲವು ಆಹಾರಗಳನ್ನು ಸೇರಿಸಿ. ಎಲೆಕೋಸು, ಹೂಕೋಸು ಮತ್ತು ಕೋಸುಗಡ್ಡೆಯಂತಹ ಹಸಿರು ಎಲೆಗಳ ತರಕಾರಿಯನ್ನು ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಿ. ಈ ತರಕಾರಿಗಳು ಆ್ಯಂಟಿ ಆಕ್ಸಿಡಂಟ್​​ಗಳು, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಹೊಂದಿವೆ.
chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago