ದೇಶ

ಕರ್ನಾಟಕದ 4 ಶಿಕ್ಷಕರಿಗೆ ರಾಷ್ಟ್ರಪತಿಯವರಿಂದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ನವದೆಹಲಿ: ಕರ್ನಾಟಕದ ನಾಲ್ವರು ಸೇರಿ ಒಟ್ಟು 63 ಶಿಕ್ಷಕರಿಗೆ ನಿನ್ನೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೇಂದ್ರ ಸರ್ಕಾರದಿಂದ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

Advertisement
Advertisement
Advertisement

ಕರ್ನಾಟಕದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ಸರ್ಕಾರಿ ಪಿಯುಸಿ ಪ್ರೌಢಶಾಲಾ ವಿಭಾಗದ ಶಿಕ್ಷಕ ನಾರಾಯಣ ಪರಮೇಶ್ವರ ಭಾಗವತ್, ಬಾಗಲಕೋಟೆ ಕೆಎಲ್​ಇ ಸೊಸೈಟಿಯ ಎಸ್​ಇಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ್ ಆನಿಗೋಳ, ಧಾರವಾಡ ಐಐಟಿ ಪ್ರಾಧ್ಯಾಪಕ ಡಾ.ಎಸ್.ಆರ್.ಮಹಾದೇವ ಪ್ರಸನ್ನ, ಬೆಂಗಳೂರಿನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಜೆ.ದಿನೇಶ್ ಬಾಬು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರಾಷ್ಟ್ರಪತಿಯವರು, ಪ್ರತಿಯೊಬ್ಬರ ಬದುಕಿನಲ್ಲೂ ಪ್ರಾಥಮಿಕ ಶಿಕ್ಷಣ ಮಹತ್ವದ್ದು ಎಂದರು. ಬೋಧನೆಯಲ್ಲಿ ಮಹಿಳೆಯರ ಪಾತ್ರವನ್ನು ಗಮನಿಸಿ ಹೇಳುವುದಾದರೆ ಶಿಕ್ಷಕಿಯರಿಗೂ ಹೆಚ್ಚಿನ ಪ್ರಮಾಣದಲ್ಲಿ ಪ್ರಶಸ್ತಿ ಸಿಗಬೇಕು. ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡುವುದು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಪ್ರಮುಖವಾದುದು ಎಂದು ಅವರು ಅಭಿಪ್ರಾಯಪಟ್ಟರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago