ಶಿಕ್ಷಣ

ಸಂಸ್ಕೃತ ಕಲಿಯುವ ಸಂಕಲ್ಪ ಮಾಡೋಣ: ಡಾ.ಶ್ರೀಶ ಕುಮಾರ್

Advertisement
Advertisement
Advertisement

ಪುತ್ತೂರು: ಬದುಕು ಮತ್ತು ಬದುಕಿನಾಚೆಯ ವಿಚಾರವನ್ನು ತಿಳಿಸಲು ಸಂಸೃತ ಬೇಕು. ಹಾಲನ್ನು ಕುದಿಸಿ, ಹೆಪ್ಪು ಹಾಕಿ, ಬೆಣ್ಣೆ ತೆಗೆದು, ಬೆಣ್ಣೆಯನ್ನು ತುಪ್ಪ ಮಾಡುವ ಕೆಲಸದಂತೆಯೇ ಸಂಸ್ಕೃತ ಕಲಿಯುವ ಕ್ರಮ. ಆ ತುಪ್ಪವೇ ಸಂಸ್ಕೃತ. ಸಂಸ್ಕೃತವನ್ನು ತೆರೆದ ಕಣ್ಣಿನಿಂದ ನೋಡಿ. ಇಂದಿನಿಂದ ನಾಲ್ಕು ಅಕ್ಷರ ಸಂಸ್ಕೃತ ಕಲಿಯುವ ಸಂಕಲ್ಪ ಮಾಡೋಣ ಎಂದು ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕ ಡಾ.ಶ್ರೀಶ ಕುಮಾರ್ ಹೇಳಿದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಸಂಸ್ಕೃತ ದಿವಸ ಹಾಗೂ ರಕ್ಷಾಬಂಧನ ಕಾರ್ಯಕ್ರಮದಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತ ಭಾಷೆ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೊಜ ಮಾತನಾಡಿ, ಭಾರತದ ಪ್ರಾಚೀನ ಹಾಗೂ ಅತ್ಯಂತ ಸಮೃದ್ಧ ಭಾಷೆ ಸಂಸ್ಕೃತ. ಸಂಸ್ಕೃತ ಶ್ಲೋಕ ಹೇಳುವುದರಿಂದ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಶಾಂತಿ, ರಕ್ಷಣೆ ಸಿಗುತ್ತದೆ. ಸಂಸ್ಕೃತ ಭಾಷೆ ಎಂದಿಗೂ ನಾಶವಾಗಲಾರದು. ಪ್ರಪಂಚದಾದ್ಯಂತ ಸಂಸ್ಕೃತ ಶ್ಲೋಕಗಳು ಪಠಿಸಲ್ಪಡುತ್ತವೆ. ಶ್ಲೋಕ ಪಠಣದಿಂದ ಆರೋಗ್ಯ ಭಾಗ್ಯ ಲಭ್ಯವಾಗುವುದು ಎಂದರು.
ಅಂಬಿಕಾ ಪ.ಪೂ. ವಿದ್ಯಾಲಯ ನೆಲ್ಲಿಕಟ್ಟೆ ಉಪಪ್ರಾಚಾರ್ಯ ಶೈನಿ ಕೆ.ಜೆ. ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕ ಆದರ್ಶ ಗೋಖಲೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶ್ರೀಕರ ಶಗ್ರಿತ್ತಾಯ ಪ್ರಾರ್ಥಿಸಿದರು. ವಿಕೇಶ್ ಪ್ರಭು ಸ್ವಾಗತಿಸಿ, ವರಲಕ್ಷ್ಮಿವಂದಿಸಿದರು. ಪವನ್ ಮತ್ತು ಮಹತಿ ಕಾರ್ಯಕ್ರಮ ನಿರೂಪಿಸಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago