ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ

By: Ommnews

Date:

Share post:

ಬೆಂಗಳೂರು : ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್​ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಇಲ್ಲಿ ಚೈತ್ರಾ ಕುಂದಾಪುರ ಕೆಲವರಿಗೆ ಒಳ್ಳೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್​​ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಟ್ಟಿದ್ದರು.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section