ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲಾಗುವುದು : ಅಮಿತ್ ಶಾ

0
119

ನವದೆಹಲಿ: ಎಡಪಂಥೀಯ ಉಗ್ರವಾದ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಡಪಂಥೀಯ ಉಗ್ರವಾದ ಕುರಿತ ಪರಿಶೀಲನಾ ಸಭೆ ಮಾಡಿದ್ದಾರೆ.

ಕೇಂದ್ರ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಕೇಂದ್ರ ಗೃಹ ಕಾರ್ಯದರ್ಶಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮಹಾನಿರ್ದೇಶಕರು, ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮತ್ತು ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ನಿಗ್ರಹಿಸುವಲ್ಲಿ ಯಶಸ್ಸು ಸಾಧಿಸಲಾಗಿದ್ದು, ಈ ಹೋರಾಟವು ನಿರ್ಣಾಯಕ ಹಂತವನ್ನು ತಲುಪಿದೆ ಎಂದಿದ್ದಾರೆ.

ಪ್ರಧಾನಿ ಮೋದಿಯವರ ಸಂಕಲ್ಪ ಮತ್ತು ಎಡಪಂಥೀಯ ಉಗ್ರವಾದದಿಂದ ಬಾಧಿತವಾದ ಎಲ್ಲಾ ರಾಜ್ಯಗಳ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲಾಗುವುದು ಎಂದು ಹೇಳಿದ್ದಾರೆ.

ಎಡಪಂಥೀಯ ಉಗ್ರವಾದದ ವಿರುದ್ಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು (ಸಿಎಪಿಎಫ್) ನಿಯೋಜಿಸುವುದು, ಅಭಿವೃದ್ಧಿಯನ್ನು ತರ್ಕಬದ್ಧಗೊಳಿಸುವುದು ಮತ್ತು ನಿರ್ವಾತ ಪ್ರದೇಶಗಳಲ್ಲಿ ಶಿಬಿರಗಳನ್ನು ಸ್ಥಾಪಿಸುವುದು ಮೋದಿ ಸರ್ಕಾರದ ಆದ್ಯತೆಗಳಾಗಿವೆ. ಎಡಪಂಥೀಯ ಉಗ್ರವಾದದಿಂದ ಮುಕ್ತವಾದ ಪ್ರದೇಶಗಳ ಮೇಲೆ ಕಣ್ಗಾವಲು ಅವಶ್ಯಕತೆಯಿದೆ. ಇದರಿಂದ ಈ ಸಮಸ್ಯೆ ಮತ್ತೆ ಹುಟ್ಟಿಕೊಳ್ಳುವುದಿಲ್ಲ. ಎಡಪಂಥೀಯ ಉಗ್ರಗಾಮಿಗಳು ಇತರೆ ರಾಜ್ಯಗಳಲ್ಲಿ ಆಶ್ರಯ ಪಡೆಯದಂತೆ ಮೇಲ್ವಿಚಾರಣೆ ಮಾಡುವ ಅಗತ್ಯವೂ ಇದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here