ಮಂಗಳೂರು : ಶ್ರೀ ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು.
ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ.
ತಮ್ಮ ವಿಶ್ವಾಸಿ, ಶ್ರೀ. ವಿನೋದ್ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ (ಸಂಪರ್ಕ : 9342599299)